ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.
ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.
ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.
ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.