Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:11 - ಪರಿಶುದ್ದ ಬೈಬಲ್‌

11 ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:11
22 ತಿಳಿವುಗಳ ಹೋಲಿಕೆ  

ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!


ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.


ದೋರ್ ಬೆಟ್ಟದ ಮೇಲಿರುವ ದೋರಿನ ಅರಸ ಗಿಲ್ಗಾಲದಲ್ಲಿಯ ಗೋಯಿಮ್‌ನ ಅರಸ


ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.


ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.


ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.


ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.


ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.


ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.


ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು.


ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.


ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.


ತಾನಕದ ಅರಸ ಮೆಗಿದ್ದೋವಿನ ಅರಸ


ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.


ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.


ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು