Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:16 - ಪರಿಶುದ್ದ ಬೈಬಲ್‌

16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:16
20 ತಿಳಿವುಗಳ ಹೋಲಿಕೆ  

ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.


ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.


ಇಜ್ರೇಲಿನ ಪ್ರದೇಶದಲ್ಲಿ ಈಜೆಬೆಲಳನ್ನು ನಾಯಿಗಳು ಕಿತ್ತುತಿನ್ನುತ್ತವೆ. ಈಜೆಬೆಲಳನ್ನು ಸಮಾಧಿಮಾಡುವುದಿಲ್ಲ’” ಎಂದು ಹೇಳಿದನು. ಬಳಿಕ ಯುವ ಪ್ರವಾದಿಯು ಬಾಗಿಲನ್ನು ತೆರೆದು ಓಡಿಹೋದನು.


ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ,


ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.


ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.


ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


ಇಜ್ರೇಲ್, ಯೆಗ್ದೆಯಾಮ್, ಜನೋಹ,


ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು