Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:18 - ಪರಿಶುದ್ದ ಬೈಬಲ್‌

18 ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬೈಲೂ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರಡಿಸುವಿರಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:18
18 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಅಲ್ಲಿಂದ ಆ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ “ಬಾಲಾ” ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.)


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ


ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.


ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.


ದಾವೀದನ ಸೈನ್ಯವು ಇಸ್ರೇಲರಾದ ಅಬ್ಷಾಲೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು.


ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು