Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:7 - ಪರಿಶುದ್ದ ಬೈಬಲ್‌

7 ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನಸ್ಸೆಯವರ ಸ್ವಾಸ್ತ್ಯದ ಮೇರೆಯು ಆಶೇರ್ ಊರಿನಿಂದ ತೊಡಗಿ ಶೆಕೆವಿುನ ಪೂರ್ವದಲ್ಲಿರುವ ವಿುಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನಸ್ಸೆಯ ಮೇರೆ, ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿನವರೆಗೂ ಇತ್ತು. ಅಲ್ಲಿಂದ ದಕ್ಷಿಣ ಕಡೆಯಿರುವ ಎನ್ ತಪ್ಪೂಹದ ನಿವಾಸಗಳಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:7
15 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,


ಅವರಿಗೆ ಶೆಕೆಮನ್ನು ಕೊಡಲಾಯಿತು. ಶೆಕೆಮ್ ಆಶ್ರಯನಗರವಾಗಿತ್ತು. ಇದಲ್ಲದೆ ಗೆಜೆರ್,


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು


ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.


ಒಂದು ದಿನ ಯೋಸೇಫನ ಅಣ್ಣಂದಿರು ತಮ್ಮ ತಂದೆಯ ಆಡುಕುರಿಗಳನ್ನು ಕಾಯಲು ಶೆಕೆಮಿಗೆ ಹೋದರು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.


ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.


ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು