Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:10 - ಪರಿಶುದ್ದ ಬೈಬಲ್‌

10 ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:10
24 ತಿಳಿವುಗಳ ಹೋಲಿಕೆ  

ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.


ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.


ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.


ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.


ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.


ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:


ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.


ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.


“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.


ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವಜನರಿಗೆ ಹಂಚಲು ಆಗುವದಿಲ್ಲ.’”


ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


ಇಸ್ರೇಲರ ಕುಲಗಳಿಗೆ ಪ್ರದೇಶವನ್ನು ಹೇಗೆ ಹಂಚಬೇಕೆಂಬುದನ್ನು ಯೆಹೋವನು ಮೋಶೆಗೆ ಹೇಳಿದ್ದನು. ಆತನು ಆಜ್ಞಾಪಿಸಿದ ರೀತಿಯಲ್ಲಿಯೇ ಇಸ್ರೇಲರು ಪ್ರದೇಶವನ್ನು ಹಂಚಿಕೊಂಡರು.


ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.


ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು