Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:12 - ಪರಿಶುದ್ದ ಬೈಬಲ್‌

12 ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:12
11 ತಿಳಿವುಗಳ ಹೋಲಿಕೆ  

ಯೋಸೇಫನ ಕುಟುಂಬದವರು ಈ ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.


ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು.


ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.


ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು