Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:28 - ಪರಿಶುದ್ದ ಬೈಬಲ್‌

28 ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಅವುಗಳ ಗ್ರಾಮಗಳೂ ಇವೇ. ಬೆನ್ಯಾಮೀನ್ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:28
22 ತಿಳಿವುಗಳ ಹೋಲಿಕೆ  

ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.


ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದ್ದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು.


ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.


ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ಬೆನ್ಯಾಮೀನ್ ಕುಲದ ಕುಟುಂಬಗಳು: ಬೆಲಗನ ಕುಟುಂಬದವರಾದ ಬೆಲಗ್ಯರು; ಅಷ್ಬೇಲನ ಕುಟುಂಬದವರಾದ ಅಷ್ಬೇಲ್ಯರು; ಅಹೀರಾಮನ ಕುಟುಂಬದವರಾದ ಅಹೀರಾಮ್ಯರು;


ರೆಕೆಮ್, ಇರ್ಫೇಲ್, ತರಲಾ,


ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.


ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.


ನೆಟೋಫದವನಾದ ಬಾಣನ ಮಗ ಹೇಲೆದ್, ಬೆನ್ಯಾಮೀನ್ ಕುಟುಂಬದ ಗಿಬೆಯದ ರೀಬೈ ಎಂಬವನ ಮಗನಾದ ಇತ್ತೈ,


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.


ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು