Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:6 - ಪರಿಶುದ್ದ ಬೈಬಲ್‌

6 ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:6
11 ತಿಳಿವುಗಳ ಹೋಲಿಕೆ  

ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


“ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.


ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.


ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು