Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:7 - ಪರಿಶುದ್ದ ಬೈಬಲ್‌

7 ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಸಿಕ್ಕುವದಿಲ್ಲ; ಯೆಹೋವನ ಯಾಜಕ ಸೇವೆಯೇ ಅವರ ಸ್ವಾಸ್ತ್ಯವಾಗಿದೆ. ಗಾದ್ ರೂಬೇನ್ ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದ ಸ್ವಾಸ್ತ್ಯವು ಸಿಕ್ಕಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:7
11 ತಿಳಿವುಗಳ ಹೋಲಿಕೆ  

ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು.


ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು