Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವದಕ್ಕಿಂತ ಮುಂಚೆ ಯೆಹೋಶುವನು ಅವರಿಗೆ - ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿಗೆ ನನ್ನ ಬಳಿಗೆ ಬನ್ನಿರಿ; ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟುಹಾಕುವೆನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:8
13 ತಿಳಿವುಗಳ ಹೋಲಿಕೆ  

ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.


ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.”


ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು