Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:51 - ಪರಿಶುದ್ದ ಬೈಬಲ್‌

51 ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಪ್ರಧಾನರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತಗಳು ಇವೇ. ಹೀಗೆ ದೇಶ ವಿಭಾಗಕಾರ್ಯವು ಪೂರೈಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:51
18 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.


ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ತರುವಾಯ ಯೆಹೋವನು ಯೆಹೋಶುವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು