Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:11 - ಪರಿಶುದ್ದ ಬೈಬಲ್‌

11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:11
27 ತಿಳಿವುಗಳ ಹೋಲಿಕೆ  

“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು.


ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ.


“ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


“ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಹರಿದು ಕಾಣದೆಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.


ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು