Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:14 - ಪರಿಶುದ್ದ ಬೈಬಲ್‌

14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:14
18 ತಿಳಿವುಗಳ ಹೋಲಿಕೆ  

ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.


ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.


ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.


ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.


ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.


ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.


ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.


ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು.


ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು.


ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.


ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.


ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.


ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು