Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:4 - ಪರಿಶುದ್ದ ಬೈಬಲ್‌

4 ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳ ಬಂದವರಿಗೆ - ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬದು ನನಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:4
9 ತಿಳಿವುಗಳ ಹೋಲಿಕೆ  

ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.


ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.


ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟುಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು.


ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.


ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು