Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:3 - ಪರಿಶುದ್ದ ಬೈಬಲ್‌

3 ನಿಮ್ಮಲ್ಲಿ ಒಬ್ಬನು ತಿಳಿಯದೆ ಆಕಸ್ಮಿಕವಾಗಿ ನರಹತ್ಯ ಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:3
8 ತಿಳಿವುಗಳ ಹೋಲಿಕೆ  

“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.


“ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು.


“ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.


ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.


“ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು