Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:8 - ಪರಿಶುದ್ದ ಬೈಬಲ್‌

8 ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:8
12 ತಿಳಿವುಗಳ ಹೋಲಿಕೆ  

ಮೆರಾರೀ ಸಂತತಿಯವರು ಮರುಭೂಮಿಯಲ್ಲಿದ್ದ ಬೆಚೆರ್, ಯಹಚ, ಕೆದೇಮೋತ್ ಮತ್ತು ಮೇಫಾತ್ ಎಂಬ ಊರುಗಳನ್ನೂ ಅವುಗಳ ಸಮೀಪದಲ್ಲಿದ್ದ ಹೊಲಗಳನ್ನೂ ರೂಬೇನ್ ಕುಲದವರಿಂದ ಪಡೆದುಕೊಂಡರು. ರೂಬೇನ್ ಕುಲದವರು ಜೆರಿಕೊ ಪಟ್ಟಣಕ್ಕೆ ಎದುರಾಗಿದ್ದ ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು.


ರೂಬೇನ್ಯರು ಅವರಿಗೆ ಬೆಚೆರ್, ಯಹಚಾ,


ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,


ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಮೆರಾರೀ ಸಂತಾನದವರಿಗೆ ಗಾದ್ ಸಂತತಿಯವರ ಪ್ರದೇಶದಿಂದ ಗಿಲ್ಯಾದಿನ ರಾಮೋತ್, ಮಹನಯಿಮ್, ಹೆಷ್ಬೋನ್ ಮತ್ತು ಯಗ್ಜೇರ್ ಪಟ್ಟಣಗಳೂ ಅದರ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.


ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.


ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು