Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:1 - ಪರಿಶುದ್ದ ಬೈಬಲ್‌

1 ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೇವಿಕುಲಾಧಿಪತಿಗಳು ಕಾನಾನ್‍ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಇಸ್ರಾಯೇಲ್ ಕುಲಾಧಿಪತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:1
9 ತಿಳಿವುಗಳ ಹೋಲಿಕೆ  

ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.


ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.


ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”


ಜೆರಿಕೊ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:


ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು