ಯೆಹೋಶುವ 21:32 - ಪರಿಶುದ್ದ ಬೈಬಲ್32 ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಫ್ತಾಲಿ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.