Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:11 - ಪರಿಶುದ್ದ ಬೈಬಲ್‌

11 ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಇಸ್ರಾಯೇಲ್‍ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್‍ಹೊಳೆಯ ತೀರಪ್ರದೇಶದಲ್ಲಿ ವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ವಿುಕ್ಕ ಇಸ್ರಾಯೇಲ್ಯರಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:11
13 ತಿಳಿವುಗಳ ಹೋಲಿಕೆ  

ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ.


ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.


ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.


ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು


ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,


ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.


“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.


“‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು