Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:20 - ಪರಿಶುದ್ದ ಬೈಬಲ್‌

20 “‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಮತ್ತು ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:20
11 ತಿಳಿವುಗಳ ಹೋಲಿಕೆ  

ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.


ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು “ಆಕೋರ್” ಕಣಿವೆಗೆ ತೆಗೆದುಕೊಂಡು ಹೋದರು.


ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.


ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಆ ಹತ್ತು ಜನರಿಗೆ ಹೀಗೆ ಉತ್ತರಿಸಿದರು:


ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.


ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು