Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:24 - ಪರಿಶುದ್ದ ಬೈಬಲ್‌

24 ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:24
7 ತಿಳಿವುಗಳ ಹೋಲಿಕೆ  

ಈ ಕಲ್ಲುಗಳು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುತ್ತಾರೆ.


“ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ.


ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು