ಯೆಹೋಶುವ 22:28 - ಪರಿಶುದ್ದ ಬೈಬಲ್28 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿ |
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.