Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:29 - ಪರಿಶುದ್ದ ಬೈಬಲ್‌

29 “ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:29
16 ತಿಳಿವುಗಳ ಹೋಲಿಕೆ  

ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.


ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.


ಇಲ್ಲ! ನಾವು ನಮ್ಮ ಹಿಂದಿನ ಪಾಪಮಯ ಜೀವಿತಗಳ ಪಾಲಿಗೆ ಸತ್ತುಹೋದೆವು. ಹೀಗಿರಲು, ನಾವು ಪಾಪದಲ್ಲೇ ಜೀವಿಸಲು ಹೇಗೆ ಸಾಧ್ಯ?


ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.


ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.


ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.


ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


“ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ.


ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ.


ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.


ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.


ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.


ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು