Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:30 - ಪರಿಶುದ್ದ ಬೈಬಲ್‌

30 ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳೂ ರೂಬೇನ್ ಗಾದ್ ಮನಸ್ಸೆಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:30
11 ತಿಳಿವುಗಳ ಹೋಲಿಕೆ  

ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶಮಾಡಬಾರದೆಂದೂ ನಿರ್ಧರಿಸಿದರು.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.


ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.


ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.


“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.


ಆಗ ಯಾಜಕನಾದ ಫೀನೆಹಾಸನು ಈ ಕುಲಗಳವರಿಗೆ, “ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು