Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:6 - ಪರಿಶುದ್ದ ಬೈಬಲ್‌

6 ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರನ್ನು ಆಶೀರ್ವದಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:6
18 ತಿಳಿವುಗಳ ಹೋಲಿಕೆ  

ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.


ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.


ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.


ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.


ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.


ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.


ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.


ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು