ಯೆಹೋಶುವ 23:15 - ಪರಿಶುದ್ದ ಬೈಬಲ್15 ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟುವದಾಗಿಯೂ ಆತನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲವಿಧವಾದ ಕೇಡುಗಳನ್ನೂ ಬರಮಾಡಿ ತಾನು ಕೊಟ್ಟಿರುವ ಈ ಉತ್ತಮದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.