Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:4 - ಪರಿಶುದ್ದ ಬೈಬಲ್‌

4 ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:4
9 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.


ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರದೂಡುವೆನು.


“ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.


ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


“ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.


ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು