Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:6 - ಪರಿಶುದ್ದ ಬೈಬಲ್‌

6 “ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ; ಎಡಕ್ಕಾದರೂ ಬಲಕ್ಕಾದರೂ ಓರೆಯಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:6
14 ತಿಳಿವುಗಳ ಹೋಲಿಕೆ  

ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು.


ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು