Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:9 - ಪರಿಶುದ್ದ ಬೈಬಲ್‌

9 “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:9
14 ತಿಳಿವುಗಳ ಹೋಲಿಕೆ  

ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.


ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.


ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರದೂಡುವೆನು.


ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.


ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.


ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು