Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:1 - ಪರಿಶುದ್ದ ಬೈಬಲ್‌

1 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:1
13 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.


ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು