Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:12 - ಪರಿಶುದ್ದ ಬೈಬಲ್‌

12 ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:12
13 ತಿಳಿವುಗಳ ಹೋಲಿಕೆ  

“ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು.


ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಹೀಗೆ ಇಸ್ರೇಲರು ಅಮೋರಿಯರ ದೇಶದಲ್ಲಿ ತಮ್ಮ ಪಾಳೆಯ ಹಾಕಿದರು.


ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.


ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)


ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು.


“ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.


ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.


ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.


ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು