Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:26 - ಪರಿಶುದ್ದ ಬೈಬಲ್‌

26 ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:26
10 ತಿಳಿವುಗಳ ಹೋಲಿಕೆ  

ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.


ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.


ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು