Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:5 - ಪರಿಶುದ್ದ ಬೈಬಲ್‌

5 “ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:5
16 ತಿಳಿವುಗಳ ಹೋಲಿಕೆ  

“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.


“ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.


ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.


ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.


ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


(ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.


ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.


ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು