Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:6 - ಪರಿಶುದ್ದ ಬೈಬಲ್‌

6 ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:6
11 ತಿಳಿವುಗಳ ಹೋಲಿಕೆ  

ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.


“ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.


ಹೀಗಿರಲಾಗಿ, ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ, ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ,


ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.


ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.


“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.


ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.


ಇಸ್ರೇಲಿನ ಹಿರಿಯರೆಲ್ಲರೂ ಒಟ್ಟಾಗಿ ಸೇರಿಬಂದಾಗ ಲೇವಿಯರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ತಂದರು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು