Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:7 - ಪರಿಶುದ್ದ ಬೈಬಲ್‌

7 ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:7
13 ತಿಳಿವುಗಳ ಹೋಲಿಕೆ  

ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.


ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.


ನಾವು ಮೋಶೆಯ ಆಜ್ಞೆಗಳನ್ನೆಲ್ಲಾ ಪಾಲಿಸಿದೆವು. ಅದೇ ರೀತಿ ನಿನ್ನ ಆಜ್ಞೆಗಳನ್ನೆಲ್ಲಾ ಪಾಲಿಸುತ್ತೇವೆ. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರಲಿ.


ದೇವರೇ, ಮನುಷ್ಯನು ಎಷ್ಟರವನು? ನೀನು ಅವನ ಕಡೆಗೆ ಗಮನ ಕೊಡುವುದೇಕೆ?


ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು