Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:1 - ಪರಿಶುದ್ದ ಬೈಬಲ್‌

1 ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:1
32 ತಿಳಿವುಗಳ ಹೋಲಿಕೆ  

ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


“ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.


ಮಾರನೆಯ ದಿನ ನಾಬಾಲನ ಮತ್ತಿಳಿದಿತ್ತು. ಅವನ ಹೆಂಡತಿಯು ಅವನಿಗೆ ಎಲ್ಲವನ್ನು ತಿಳಿಸಿದಳು. ನಾಬಾಲನಿಗೆ ಹೃದಯಾಘಾತವಾಯಿತು. ಅವನು ಸ್ತಬ್ಧನಾದನು.


“ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ?


ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.


ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.


ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.


ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ದೂರ ಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು