Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:13 - ಪರಿಶುದ್ದ ಬೈಬಲ್‌

13 ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:13
24 ತಿಳಿವುಗಳ ಹೋಲಿಕೆ  

ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.


ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.


ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.


ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು.


ನಾನು ಕಣ್ಣೆತ್ತಿ ನೋಡಲಾಗಿ ಊಲಾ ನದಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಟಗರೊಂದು ನನ್ನ ಕಣ್ಣಿಗೆ ಬಿತ್ತು. ಟಗರಿಗೆ ಎರಡು ಉದ್ದವಾದ ಕೊಂಬುಗಳಿದ್ದವು. ಆ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದು ಕೊಂಬು ಇನ್ನೊಂದು ಕೊಂಬಿಗಿಂತ ಉದ್ದವಾಗಿತ್ತು. ಉದ್ದವಾದ ಕೊಂಬು ಇನ್ನೊಂದು ಕೊಂಬಿಗಿಂತ ಹಿಂದಕ್ಕೆ ಇತ್ತು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.


ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.


ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.


ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.


ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.


ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು