Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:9 - ಪರಿಶುದ್ದ ಬೈಬಲ್‌

9 ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಯೆಹೋಶುವನಿಗೆ - ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲೆಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:9
21 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ.


“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.


ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.


“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.


ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು.


ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.


ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಯೆಹೋವನು ಹೀಗೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು