Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:13 - ಪರಿಶುದ್ದ ಬೈಬಲ್‌

13 ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು; ಹಿಂದಣ ದಳವು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:13
8 ತಿಳಿವುಗಳ ಹೋಲಿಕೆ  

ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು.


ಎರಡನೆಯ ದಿನ ಅವರೆಲ್ಲರು ನಗರವನ್ನು ಒಂದು ಸಲ ಕ್ರಮಬದ್ಧವಾಗಿ ಸುತ್ತಿ ಪಾಳೆಯಕ್ಕೆ ಹಿಂತಿರುಗಿದರು. ಹೀಗೆ ಅವರು ಆರು ದಿನಗಳವರೆಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು