Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:6 - ಪರಿಶುದ್ದ ಬೈಬಲ್‌

6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:6
11 ತಿಳಿವುಗಳ ಹೋಲಿಕೆ  

ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,


ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು.


ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


“ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.


ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು.


ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.


ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


“‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು