ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು.
ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.
ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.
ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.