Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:2 - ಪರಿಶುದ್ದ ಬೈಬಲ್‌

2 ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:2
18 ತಿಳಿವುಗಳ ಹೋಲಿಕೆ  

ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.


ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


ಗೆಬದ ಬೆನ್ಯಾಮೀನ್ ಕುಲದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.


ಜೆರಿಕೊವಿನ ಅರಸ ಆಯಿಯ ಅರಸ ಬೇತೇಲ್ ಹತ್ತಿರ


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.


ದಾವೀದನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಕೆಲವು ವಸ್ತುಗಳನ್ನು ಬೇತೇಲಿನವರಿಗೆ, ನೆಗೆವಿನ ರಾಮೋತಿನವರಿಗೆ, ಯತ್ತೀರಿನವರಿಗೆ,


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


ರಾಜನಾದ ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರುವನ್ನು ದಾನ್ ನಗರದಲ್ಲಿರಿಸಿದನು.


ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು