Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:4 - ಪರಿಶುದ್ದ ಬೈಬಲ್‌

4-5 ಸುಮಾರು ಮೂರು ಸಾವಿರ ಜನರು “ಆಯಿ”ಗೆ ಹೋದರು. ಆದರೆ “ಆಯಿ”ಯ ಜನರು ಇಸ್ರೇಲಿನ ಸುಮಾರು ಮೂವತ್ತಾರು ಜನರನ್ನು ಕೊಂದು ಹಾಕಿದರು. ಆದ್ದರಿಂದ ಇಸ್ರೇಲಿನ ಜನರು ಓಡಿಹೋದರು. “ಆಯಿ”ಯ ಜನರು ಅವರನ್ನು ಪಟ್ಟಣದ ದ್ವಾರದಿಂದ ಕಲ್ಲುಗಣಿಗಳವರೆಗೆ ಬೆನ್ನಟ್ಟಿಕೊಂಡು ಬಂದರು. “ಆಯಿ”ಯ ಜನರು ಅವರನ್ನು ಚೆನ್ನಾಗಿ ಥಳಿಸಿದರು. ಆಗ ಇಸ್ರೇಲರು ತುಂಬ ಭಯಗೊಂಡು ಧೈರ್ಯವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದರಂತೆಯೇ ಸುಮಾರು ಮೂರುಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರನ್ನು ಎದುರಿಸಲಾಗದೆ ಓಡಿಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದರಂತೆ ಸುಮಾರು ಮೂರು ಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರ ಎದುರಿನಿಂದ ಓಡಿ ಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:4
7 ತಿಳಿವುಗಳ ಹೋಲಿಕೆ  

“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.


ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು