Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:7 - ಪರಿಶುದ್ದ ಬೈಬಲ್‌

7 ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದು ತಂದು ಅಮೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟು ಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:7
19 ತಿಳಿವುಗಳ ಹೋಲಿಕೆ  

ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ಆಗ ಇಸ್ರೇಲಿನ ರಾಜನಾದ ಯೋರಾಮನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಯೆಹೋವನೇ, ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರಲ್ಲಾ! ಈಗ ನಾನೇನು ಹೇಳಲಿ?


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು