Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:9 - ಪರಿಶುದ್ದ ಬೈಬಲ್‌

9 ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:9
19 ತಿಳಿವುಗಳ ಹೋಲಿಕೆ  

ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.


ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.


ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, “ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ” ಎಂದು ಹೇಳುವರು.


ಅದಕ್ಕೆ ಮೋಶೆ ಯೆಹೋವನಿಗೆ, “ನೀನು ನಿನ್ನ ಜನರಾದ ಇಸ್ರೇಲರನ್ನು ನಿನ್ನ ಶಕ್ತಿಯ ಮೂಲಕ ಈಜಿಪ್ಟಿನಿಂದ ಕರೆದುಕೊಂಡು ಬಂದೆ. ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು ಈ ಸುದ್ದಿಯನ್ನು ಕೇಳಿ ಕಾನಾನಿನ ನಿವಾಸಿಗಳಿಗೆ ಅದರ ಬಗ್ಗೆ ತಿಳಿಸುವರು.


ಯೆಹೋವನೇ, ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರಲ್ಲಾ! ಈಗ ನಾನೇನು ಹೇಳಲಿ?


ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ?


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.


ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.


ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು