Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:1 - ಪರಿಶುದ್ದ ಬೈಬಲ್‌

1 ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:1
24 ತಿಳಿವುಗಳ ಹೋಲಿಕೆ  

ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.


ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’


ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.


ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


“ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.


ಆದ್ದರಿಂದ ಯೆಹೋಶುವನು ತನ್ನ ಎಲ್ಲ ಸೈನ್ಯದೊಂದಿಗೆ ಗಿಲ್ಗಾಲಿನಿಂದ ಹೊರಟನು. ಯೆಹೋಶುವನೊಂದಿಗೆ ಅತ್ಯುತ್ತಮವಾದ ಯೋಧರಿದ್ದರು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು