Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:16 - ಪರಿಶುದ್ದ ಬೈಬಲ್‌

16 ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:16
8 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಲು ಗಿಬೆಯ ನಗರದಿಂದ ಹೊರಗೆ ಬಂದಿತು. ಇಸ್ರೇಲಿನ ಸೈನಿಕರು ಹಿಮ್ಮೆಟ್ಟಿದರು; ಬೆನ್ಯಾಮೀನ್ಯರು ಅವರನ್ನು ಬೆನ್ನಟ್ಟಿದರು. ಈ ರೀತಿ ಬೆನ್ಯಾಮೀನ್ಯರ ಸೈನ್ಯವು ನಗರವನ್ನು ಬಿಟ್ಟು ಬಹಳ ದೂರಹೋಗುವಂತೆ ಮಾಡಿದರು. ಬೆನ್ಯಾಮೀನ್ಯರ ಸೈನಿಕರು ಮುಂಚಿನಂತೆ ಕೆಲವು ಜನ ಇಸ್ರೇಲಿ ಸೈನಿಕರನ್ನು ಕೊಲ್ಲಲು ಆರಂಭಿಸಿದರು. ಅವರು ಸುಮಾರು ಮೂವತ್ತು ಜನ ಇಸ್ರೇಲರನ್ನು ಕೊಂದರು. ಅವರಲ್ಲಿ ಕೆಲವರನ್ನು ಹೊಲಗಳಲ್ಲಿ ಕೊಂದರು. ಒಂದು ದಾರಿ ಬೇತೇಲ್ ನಗರಕ್ಕೆ ಹೋಗುತ್ತಿತ್ತು. ಇನ್ನೊಂದು ದಾರಿ ಗಿಬೆಯಕ್ಕೆ ಹೋಗುತ್ತಿತ್ತು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


“ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು