Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:2 - ಪರಿಶುದ್ದ ಬೈಬಲ್‌

2 ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:2
27 ತಿಳಿವುಗಳ ಹೋಲಿಕೆ  

ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.


ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.


ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.


ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.


ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.


ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.


ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.


ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.


ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.


ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.


ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.


ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


“ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.


ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು.


ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.


ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು