ಯೆಹೋಶುವ 8:31 - ಪರಿಶುದ್ದ ಬೈಬಲ್31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.